ಮಾನವನ ಕಳ್ಳ ಸಾಗಾಣಿಕೆಯನ್ನು ವಿರೋಧಿಸಿ ಕಟ್ಟಿ ಬದ್ಧರಾಗಿ ವಾಕ್ ಫಾರ್ ಫ್ರೀಡಂ ಸ್ವಾತಂತ್ರ್ಯ ನಡಿಗೆ ಜಾತಾ ಕಾರ್ಯಕ್ರಮದಲ್ಲಿ ಆರ್. ಮುನಿರಾಜು ಅಭಿಮತ
ಶಿಡ್ಲಘಟ್ಟ ಜಂಗಮಕೋಟೆ: ಸಮಾಜದಲ್ಲಿ ಇದೀಗ ಮಾನವ ಕಳ್ಳ ಸಾಗಾಣಿಕೆಯು ಬಹುದೊಡ್ಡ ಸಮಸ್ಯೆಯಾಗಿ ಬೆಳೆದಿದ್ದು, ಅದರಲ್ಲೂ ಮಾನವ ಕಳ್ಳ ಸಾಗಾಣಿಕೆಗೆ ಹೆಚ್ಚಾಗಿ ಬಲಿಯಾಗುತ್ತಿರುವವರು ಹೆಂಗಸರು ಮತ್ತು ಮಕ್ಕಳು. ಇದರಿಂದ ಎಲ್ಲರೂ ಎಚ್ಚೆತ್ತುಕೊಳ್ಳಬೇಕೆದು ಶಿಡ್ಲಘಟ್ಟ ಗ್ರಾಮಾಂತರ ಆರಕ್ಷಕ ಠಾಣೆಯ ಜಂಗಮಕೋಟೆ ವರ ಠಾಣಾ ಸಹಾಯಕ ಆರಕ್ಷಕ ಉಪ ನಿರೀಕ್ಷಕ ವಿ.ಸುಬ್ರಮಣಿ ತಿಳಿಸಿದರು. ಇವರು ಪಟ್ಟಣದ ಜಂಗಮಕೋಟೆ ವೃತ್ತದಲ್ಲಿ ಜೇಸಿಐ ದೇವನಹಳ್ಳಿ ಡೈಮಂಡ್ಸ್, ಮೂಮೆಂಟ್ ಇಂಡಿಯಾ ಹಾಗೂ ಆಂಧ್ರ ಪ್ರದೇಶದ ಮದನಪಲ್ಲಿಯ ಗ್ರಾಮ ಜ್ಯೋತಿ ಸೊಸೈಟಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಾಕ್ ಫಾರ್ ಫ್ರೀಡಂ ಮಕ್ಕಳ ಕಳ್ಳ ಸಾಗಾಣಿಕೆ ತಡೆಗಟ್ಟಲು ಜನಜಾಗೃತಿ ಮೂಡಿಸುವ ಸ್ವಾತಂತ್ರ್ಯ ನಡಿಗೆ ಜಾತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳನ್ನು ಪೋಷಕರು ತುಂಬಾ ಜಾಗೃತೆಯಿಂದ ಬೆಳೆಸಬೇಕು, ಮಕ್ಕಳಿಗೆ ಯಾವುದು ಸರಿ ಯಾವುದು ತಪ್ಪು ಎಂಬ ವಿಚಾರಗಳನ್ನು ತಿಳಿಸಿಕೊಡಬೇಕು ಹಾಗೂ ಮಾನವ ಕಳ್ಳ ಸಾಗಾಣಿಕೆಯ ಕಾಯ್ದೆ ಕಾನೂನುಗಳ ಬಗ್ಗೆ ಎಲ್ಲರಲ್ಲಿ ಅರಿವು ಮೂಡಿಸಿ ಇಂತಹ ಜಾತ, ಬೀದಿ ನಾಟಕ, ಅರಿವಿನ ಕರಪತ್ರ, ಗೋಡೆ ಬರಹ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಮೂಲಕ ಎಲ್ಲರಲ್ಲೂ ಜಾಗೃತಿ ಮೂಡಿಸಿ ನಾವೆಲ್ಲರೂ ಶಾಂತಿಯುತವಾಗಿ ಈ ಮಾನವ ಕಳ್ಳ ಸಾಗಾಣಿಕೆಯನ್ನು ನಿರ್ಮೂಲನೆ ಮಾಡಬೇಕು ಹಾಗೂ ಶಾಲಾ ಕಾಲೇಜುಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ತಮ್ಮ ಪೋಷಕರ...